~ ಸಜ್ಜನ ~
ಕೃಪಾಲುರಕೃತದ್ರೋಹಃ ತಿತಿಕ್ಷುಃ ಸರ್ವದೇಹಿನಾಮ್ |
ಸತ್ಯಸಾರೋs ನವದ್ಯಾತ್ಮಾ ಸಮಃ ಸರ್ವೋಪಕಾರಕಃ ||
ಸಜ್ಜನನು ಕೃಪೆಯ ಸಾಕಾರವಾಗಿರುತ್ತಾನೆ. ಅವನು ಯಾರ ಬಗ್ಗೆಯೂ ವೈರಭಾವ ಹೊಂದದೆ, ಅವರ ಸದ್ಗುಣಗಳನ್ನು ಎಲ್ಲರಿಗೂ ತಿಳಿಸುತ್ತಾನೆ. ಅಸಹನೀಯ ದುಃಖ ಉಂಟಾದರೂ ಅದನ್ನು ತೋರ್ಪಡಿಸದೆ ಸಹಿಸುತ್ತ ದೇವರನ್ನು ನೆನೆಯುತ್ತ ಸಂತೋಷದಿಂದಿರಲು ಪ್ರಯತ್ನಿಸುತ್ತಾನೆ. ಪಾಪಕೃತ್ಯಗಳಿಂದ ದೂರವಾಗಿರುತ್ತಾನೆ.
ಮನಸ್ಸಿನಲ್ಲಿಯೂ ಅಂಥ ವಿಚಾರ ಮಾಡದೆ ಎಲ್ಲರಿಗೂ ಒಳ್ಳೆಯದಾಗಲೆಂದು ಸದಾ ಆಶಿಸುತ್ತಿರುತ್ತಾನೆ.
~ ಶ್ರೀಕೃಷ್ಣಭಾರತೀ /ಸಂಗ್ರಹ, ವ್ಯಾಖ್ಯಾನ: ಪಂಡಿತ ಸಮೀರಾಚಾರ್ಯ ಕಂಠಪಲ್ಲೀ
| ಮೂಲ ಸಂಗ್ರಹ: ವಿಜಯವಾಣಿ
No comments:
Post a Comment