ಯೋವಜಾನಾತಿ ಶಕ್ತೋಪಿ ದ್ವೇಷಾಲ್ಲೋಭಾನ್ಮದಾದಪಿ |
ಪೂರ್ವೋಕ್ತಪೋಷಾನ್ ಸಂಪ್ರೇಯಾನ್ ಮೃತೋ ನಿರಯಮುಲ್ಬಣಮ್ ||
ಅಕೀರ್ತಿಂ ಲಭ್ಯತೇ ಜೀವನ್ನಕೀರ್ತೇರ್ಮರಣಂ ವರಂ |
ನೈವ ಗೃಹ್ಣಂತಿ ನಾಮಾಸ್ಯ ಯೋಪಕಿರ್ತಯ ಜೀವತಿ ||
ಧನ-ಸಂಪತ್ತುಗಳ ಸಾಧನವಿದ್ದೂ ಸ್ವತಃ ಪೋಷಣೆ ಮಾಡಲು ಸಮರ್ಥನಾಗಿದ್ದರೂ ಆಶ್ರಯಿಸಿ ಬಂದ ಬಂಧುಜನರನ್ನು – ಪೋಷ್ಯವರ್ಗದವರನ್ನು ದ್ವೇಷದಿಂದ, ಲೋಭದಿಂದ ಅಥವಾ ಗರ್ವದಿಂದ ಪೋಷಿಸದೇ ಕರ್ತವ್ಯಚ್ಯುತನಾಗಿ ತಿರಸ್ಕಾರಮಾಡುವವನು ಅಪಕೀರ್ತಿಗೆ ಒಳಗಾಗುತ್ತಾನೆ. ಒಂದು ರೀತಿಯಲ್ಲಿ ಬದುಕಿದ್ದರೂ ಸತ್ತಂತೆ. ಇಂಥವನ ಹೆಸರನ್ನು ಹೇಳಲು ಯಾರೂ ಬಯಸುವುದಿಲ್ಲ. ಆದ್ದರಿಂದ ದೇವರು ಅನುಕೂಲ ಕೊಟ್ಟಾಗ ಆಶ್ರಯಿಸಿ ಬರುವವರನ್ನು ಪೋಷಿಸಬೇಕು.
ಕೃಪೆ/ಮೂಲ ಸಂಗ್ರಹ: ವಿಜಯವಾಣಿ, ||ಶ್ರೀ ವಿಷ್ಣುರಹಸ್ಯ/ಸಂಗ್ರಹ, ವ್ಯಾಖ್ಯಾನ: ಡಾ. ಕಂಠಪಲ್ಲೀ ಸಮೀರಣಾಚಾರ್ಯ, ವೇದಪೀಠ, ಹುಬ್ಬಳ್ಳಿ